ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ರಾಜ್ಯದಲ್ಲಿ ಹೂಡಿಕೆ: ದಕ್ಷಿಣ ಕೊರಿಯಾ ಕಾನ್ಸುಲ್ ಜನರಲ್ ಜತೆ ಸಚಿವ ಎಂ ಬಿ ಪಾಟೀಲ ಚರ್ಚೆ
ಮುಖ್ಯವಾಗಿ ವಿದ್ಯುತ್ ಚಾಲಿತ ವಾಹನ ತಯಾರಿಕೆ, ಗ್ರೀನ್ ಎನರ್ಜಿ, ಮರುಬಳಕೆ ಇಂಧನ, ಆಟೋಮೊಬೈಲ್, ವೈಮಾಂತರಿಕ್ಷ ಮತ್ತು ಸಂಶೋಧನೆ ಮುಂತಾದ ವಲಯಗಳಿಗೆ ನೀಡಿರುವ ಆದ್ಯತೆ ಬಗ್ಗೆ ಮನದಟ್ಟು ಮಾಡಿಕೊಟ್ಟ
ಬೆಂಗಳೂರು: ದಕ್ಷಿಣ ಕೊರಿಯಾದ ಕಾನ್ಸುಲ್ ಜನರಲ್ ಚಾಂಗ್ ನ್ಯುನ್ ಕಿಮ್ ನೇತೃತ್ವ ನಿಯೋಗ ಮಂಗಳವಾರ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿತು.
ಸಚಿವ ಪಾಟೀಲ ನೇತೃತ್ವದ ರಾಜ್ಯ ನಿಯೋಗವು ಇತ್ತೀಚಿಗೆ ಕೊರಿಯಾಕ್ಕೆ ಭೇಟಿ ನೀಡಿ, ರಾಜ್ಯದಲ್ಲಿ ಹೆಚ್ಚು ಬಂಡವಾಳ ನೀಡುವಂತೆ ಅಲ್ಲಿನ ಉದ್ದಿಮೆಗಳಿಗೆ ಆಹ್ವಾನಿಸಿತ್ತು.
ಇಂದಿನ ಭೇಟಿಯ ಸಂದರ್ಭದಲ್ಲಿ ಪಾಟೀಲ ಅವರು, ರಾಜ್ಯದಲ್ಲಿ ಇರುವ ಕೈಗಾರಿಕಾ ಕಾರ್ಯಪರಿಸರ ಮತ್ತು ಉದ್ಯಮಸ್ನೇಹಿ ನೀತಿಗಳನ್ನು ವಿವರಿಸಿದರು. ಮುಖ್ಯವಾಗಿ ವಿದ್ಯುತ್ ಚಾಲಿತ ವಾಹನ ತಯಾರಿಕೆ, ಗ್ರೀನ್ ಎನರ್ಜಿ, ಮರುಬಳಕೆ ಇಂಧನ, ಆಟೋಮೊಬೈಲ್, ವೈಮಾಂತರಿಕ್ಷ ಮತ್ತು ಸಂಶೋಧನೆ ಮುಂತಾದ ವಲಯಗಳಿಗೆ ನೀಡಿರುವ ಆದ್ಯತೆ ಬಗ್ಗೆ ಮನದಟ್ಟು ಮಾಡಿಕೊಟ್ಟರು.
ಕೊರಿಯಾ ನಿಯೋಗದಲ್ಲಿ ಸಂಶೋಧಕರಾದ ಜೂನ್ ಸಿಕ್ ಹ್ವಾಂಗ್, ಇಂದುಜಾ ಅಗರವಾಲ್, ಸಿಯೋ ಯಂಗ್ ಮೂನ್ ಕೂಡ ಇದ್ದರು.
