ಬೆಂಗಳೂರು : ಮನೆಯಲ್ಲಿ ಕುಳಿತುಕೊಳ್ಳಬೇಡಿ. ಮತಗಟ್ಟೆಗೆ ಬಂದು ಮತದಾನ ಮಾಡಿ ಎಂದು ರಾಜ್ಯಸಭಾ ಸದಸ್ಯೆ, ಲೇಖಕಿ ಸುಧಾ ಮೂರ್ತಿ ಮನವಿ ಮಾಡಿದ್ದಾರೆ.
ನಗರದ ಬಿಇಎಸ್ ಮತಗಟ್ಟೆಯಲ್ಲಿ ಪತಿ ನಾರಾಯಣಮೂರ್ತಿ ಅವರ ಜೊತೆ ಬಂದು ಸುಧಾ ಮೂರ್ತಿ ಮತದಾನ ಮಾಡಿದರು.
ನಂತರ ಸುದ್ದಿ ಗಾರರ ಜೊತೆ ಮಾತನಾಡಿದ ಅವರು ನನ್ನ ಮನವಿ ಇಷ್ಟೇ. ಮನೆಯಿಂದ ಹೊರಕ್ಕೆ ಬನ್ನಿ. ಮತಗಟ್ಟೆಗೆ ತೆರಳಿ ಮತದಾನ ಮಾಡಿ ಎಂದರು.
ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿ ಮತದಾನದ ಪ್ರಮಾಣ ಕಡಿಮೆಯಾಗಿರುತ್ತದೆ. ಜನ ಮನೆಯಿಂದ ಹೊರಕ್ಕೆ ಬಂದು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು ಎಂದು ಅವರು ಮನವಿ ಮಾಡಿದರು.