ಪರಿಶಿಷ್ಟ ಜಾತಿ, ವರ್ಗ, ಮತ್ತು ಇತರ ಹಿಂದುಳಿದ ವರ್ಗಗಳಿಗೆ ನೀಡಲಾದ ಮೀಸಲಾತಿಯಲ್ಲಿ ಮುಸ್ಲೀಂ ರಿಗೆ ಧರ್ಮದ ಹೆಸರಿನಲ್ಲಿ ಮೀಸಲಾತಿ ನೀಡಲು ನಾವು ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ತೆಲಂಗಾಣದಲ್ಲಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಮಾತನಾಡುತ್ತಿದ್ದ ಅವರು ಕಾಂಗ್ರೆಸ್ ಸರ್ಕಾರಗಳನ್ನು ಟೀಕಿಸಿದರು. ಕಾಂಗ್ರೆಸ್ ಸರ್ಕಾರಗಳು ಧರ್ಮಾಧಾರಿತ ಮೀಸಲಾತಿ ನೀಡಲು ಮುಂದಾಗಿವೆ ಎಂದೂ ಪ್ರಧಾನಿ ಹೇಳಿದರು.
ಕಾಂಗ್ರೆಸ್ ದೇಶದ ಸಂವಿಧಾನಕ್ಕೆ ಅವಮಾನ ಮಾಡಲು ಹೊರಟಿದೆ. ಅವರು ಇದನ್ನೆಲ್ಲ ಮಾಡುತ್ತಿರುವುದು ಓಟ್ ಬ್ಯಾಂಕಿಗಾಗಿ. ಎಂದು ಪ್ರಧಾನಿ ಆರೋಪಿಸಿದರು. ನಾನು ಬದುಕಿ ಇರುವ ವರೆಗೆ ಪರಿಶಿಷ್ಟ ಜಾತಿ ವರ್ಗ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಮುಸ್ಲೀಮ್ ರಿಗೆ ಧರ್ಮದ ಹೆಸರಿನಲ್ಲಿ ಮೀಸಲಾತಿ ನೀಡಲು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದರು.
.
