ಬೆಂಗಳೂರು : ದೇಶದ 102 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದೆ., ಈ ನಡುವೆ ಎಚ್ಚರಿಕೆಯಿಂದ ಮತ ಚಲಾಯಿಸುವಂತೆ ಮತದಾರರಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವೀಟರ್​​) ನಲ್ಲಿ ಪೋಸ್ಟ್ ಮಾಡಿರುವ ಅವರು, ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟ ಇಂದಿನಿಂದ ಆರಂಭವಾಗಿದೆ ಎಂದು ಹೇಳಿದ್ದಾರೆ.

ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುವ ಹೋರಾಟ ಇಂದಿನಿಂದ ಪ್ರಾರಂಭವಾಗುತ್ತದೆ. ನನ್ನ ಪ್ರೀತಿಯ ನಾಗರಿಕರೇ, 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಎಚ್ಚರಿಕೆಯಿಂದ ಮತ ಚಲಾಯಿಸುವಂತೆ ನಾನು ವಿನಂತಿಸಿಕೊಳ್ಳುತ್ತೇನೆ.

ಭಾರತದ ಭವಿಷ್ಯವನ್ನು ನಿರ್ಧರಿಸಲು ನೀವು ಇವಿಎಂನಲ್ಲಿ ಬಟನ್ ಒತ್ತುವುದಕ್ಕೂ ಮೊದಲು ಯೋಚಿಸಿ,ನಮ್ಮ ಸಂಸ್ಥೆಗಳು ಸರ್ವಾಧಿಕಾರದ ಮೂಲಕ ಬುಡಮೇಲು ಆಗಬೇಕೆಂದು ನೀವು ಬಯಸುತ್ತೀರಾ ಅಥವಾ ಪ್ರಜಾಪ್ರಭುತ್ವವನ್ನು ರಕ್ಷಿಸಲು ಬಯಸುತ್ತೀರಾ? ನೀವೀಗ ಭಾರತದ ಭವಿಷ್ಯವನ್ನು ನಿರ್ಧರಿಸುವ ವ್ಯಕ್ತಿಯಾಗಿದ್ದೀರಿ ಎಂದು ಹೇಳಿದ್ದಾರೆ.

Author

Leave a Reply

Your email address will not be published. Required fields are marked *