ನಾಳೆ ಬೆಳ್ತಂಗಡಿಯಲ್ಲಿ “ಕೊಂದವರು ಯಾರು?” ಆಂದೋಲನದಿಂದ ಮಹಿಳೆಯರ ಜಾಥಾ ಮತ್ತು ಮಹಿಳಾ ನ್ಯಾಯ ಸಮಾವೇಶ

ಬೆಂಗಳೂರು, ಡಿ.15 : ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಪ್ರಕರಣ ಹಾಗೂ ಅದಕ್ಕೆ ಸಂಬಂಧಿಸಿದಂತೆ ವರ್ಷಗಳಿಂದ ಪ್ರಶ್ನಾರ್ಥಕವಾಗಿರುವ ಇತರ ಅನುಮಾನಾಸ್ಪದ ಸಾವು ಪ್ರಕರಣಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ, “ ಕೊಂದವರು ಯಾರು?” ಆಂದೋಲನದಿಂದ ಮಹಿಳೆಯರ ಜಾಥಾ ಹಮ್ಮಿಕೊಳ್ಳಲಾಗಿದೆ. ಬೆಳ್ತಂಗಡಿಯ ಮಾರಿಗುಡಿಯಿಂದ ಬೆಳಗ್ಗೆ ೧೦.೩೦ ಗಂಟೆಗೆ ಮೌನ ಮೆರವಣಿಗೆ ಹೊರಡಲಿದೆ. ನಂತರ ತಾಲ್ಲೂಕು ಕಚೇರಿ ಆವರಣದಲ್ಲಿ ಸಮಾವೇಶ ಜರುಗಲಿದೆ.…

