Category ರಾಜ್ಯ

ಜನಪರ ಪತ್ರಿಕೋದ್ಯಮ ನಮ್ಮ ಆದ್ಯತೆ ಆಗಬೇಕು: ಪಿ.ಸಾಯಿನಾಥ್

ಚಿತ್ರದುರ್ಗ: ಸಮಾಜಮುಖಿ, ಜನಪರ ಪತ್ರಿಕೋದ್ಯಮ ನಮ್ಮ ಆದ್ಯತೆ ಆಗಬೇಕೆ ಹೊರತು, ಕಾರ್ಪೊರೇಟ್ ಪತ್ರಿಕೋದ್ಯಮವಲ್ಲ ಎಂದು ಮ್ಯಾಗ್ಸಸೆ ಪ್ರಶಸ್ತಿ ಪುರಸ್ಕೃತ ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ತಿಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಗರದ ಎಸ್.ಎರ್.ಎಸ್. ಸಂಸ್ಥೆ ಆಡಿಟೋರಿಯಂನಲ್ಲಿ ಏರ್ಪಡಿಸಿದ್ದ ಕೆಯುಡಬ್ಲೂಜೆ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಭಾರತೀಯ ಪತ್ರಿಕೋದ್ಯಮಕ್ಕೆ ತನ್ನದೇ ಆದ ಇತಿಹಾಸ, ಪರಂಪರೆ…

ಅಮಿತ್ ಷಾ ರೋಡ್ ಶೋ…ಜೆಡಿಎಸ್ ಕಾರ್ಯಕರ್ತರ ಕೇಸರೀಕರಣ. ಕೇಳಿ ಬಂದ ಜೈಶ್ರೀರಾಮ ಘೋಷಣೆ..ಜೆಡಿಎಸ್ ಕಾರ್ಯಕರ್ತರನ್ನು ಬಿಜೆಪಿ ಮಡಿಲಿಗೆ ಹಾಕಿದ ಕುಮಾರಣ್ಣ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಇವತ್ತು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಚೆನ್ನಪಟ್ಟಣದಲ್ಲಿ ರೋಡ್ ಶೋ ನಡೆಸಿದರು. ಅವರ ಜೊತೆ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಇದ್ದರು.ಬಿಜೆಪಿ ರಾಜ್ಯ ಘಟಕದ್ ಅಧ್ಯಕ್ಷ ವಿಜಯೇಂದ್ರ ಕೂಡ ಪಾಲ್ಗೊಂಡಿದ್ದರುಕುಟುಂಬ ರಾಜಕಾರಣವನ್ನು…

ಬೆಳಗಾವಿಗೆ ರೈತರು ಬಂದರು ದಾರಿ ಬಿಡಿ; ಅವರ ಕೂಗಿಗೆ ಕಿವಿ ಕೊಡಿ. ಇಲ್ಲದಿದ್ದರೆ ಅವರ ಸಿಟ್ಟು ನಿಮ್ಮನ್ನು ಸುಟ್ಟು ಹಾಕೀತು..!

ಬೆಳಗಾವಿ : ಬೆಳಗಾವಿಯಲ್ಲಿ ರೈತರ ಪ್ರತಿಭಟನೆ.. ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯ. ಎಲ್ಲಿ ನೋಡಿದರೂ ಹಸಿರು ಶಾಲಿನ ಮೆರವಣಿಗೆ. ಆದರೆ ರಾಜಕಾರಣಿಗಳಿಗೆ ಚುನಾವಣೆಯ ಗಡಿಬಿಡಿ. ರೈತರ ಮಾತು ಕೇಳಲು ಅವರಿಗೆ ಸಮಯವಿಲ್ಲ.. ಜಿಲ್ಲೆಯ ರೈತರು ಮತ್ತು ವಿವಿಧ ಮಠಾಧೀಶರು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಬರಗಾಲದ ಪರಿಹಾರ ನೀಡಬೇಕು, ಸಾಲ ಮನ್ನಾ ಮಾಡಬೇಕು, ಘಟಪ್ರಭಾ ನದಿಯಿಂದ ಎಡ…

ಕರ್ನಾಟಕಕ್ಕೆ ಬಂದು ಮತ ಕೇಳಲು ನಿಮಗೆ ನೈತಿಕತೆ ಇದೆಯಾ ? ಕೇಂದ್ರ ಗೃಹ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದಲ್ಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿದ್ದಾರೆ. ಅಮಿತ್ ಶಾ ಬೆಂಗಳೂರಿನಲ್ಲಿ ಕಾಂಗ್ರೆಸ್ ಮೇಲೆ ದಾಳಿ ಮಾಡಿದರೆ, ಮೈಸೂರಿನಿಂದಲೇ ಸಿದ್ದರಾಮಯ್ಯ ಪ್ರಶ್ನೆಗಳ ಸುರಿ ಮಳೆ ಗೈದಿದ್ದಾರೆ. ರಾಜ್ಯಕ್ಕೆ ಅಮಿತ್ ಶಾ, ಜೆ ಪಿ ನಡ್ಡಾ, ಪ್ರಧಾನಿ ಮೋದಿಯವರು ಯಾರೇ ಬರಲಿ ಮತದಾರರ ಮನ ಗೆಲ್ಲಲು ಸಾಧ್ಯವಾಗುವುದಿಲ್ಲ. ಅಮಿತ್ ಶಾ…

ಕಾಂಗ್ರೆಸ್ ತನ್ನ ಆಡಳಿತಾವಧಿಯಲ್ಲಿ 2 ಲಕ್ಷ ಕೋಟಿ ಭ್ರಷ್ಟಾಚಾರ ಮಾಡಿದೆ ಕೇಂದ್ರ ಗೃಹ ಸಚಿವರ ಆರೋಪ. ಹಾಗಿದ್ದರೆ ಕಳೆದ 10 ವರ್ಷದಿಂದ ಹಗರಣ ಹೊರಗೆ ಹಾಕದೇ ಇವರು ಚಳ್ಳೆ ಹಣ್ಣು ತಿನ್ನುತ್ತಿದ್ದರಾ ?

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಎನ್ ಡಿ ಎ ಮತ್ತು ಇಂಡಿಯಾ ಒಕ್ಕಟವನ್ನು ಹೋಲಿಸಲು ಸಾಧ್ಯವೇ ಇಲ್ಲ. ಇಂಡಿಯಾ ಒಕ್ಕೂಟ ಪರಿವಾರವಾದಿಗಳು ಮತ್ತು ಭ್ರಷ್ಟಾಚಾರಿಗಳ ಒಕ್ಕೂಟ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಆರೋಪಿಸಿದ್ದಾರೆ. ಈ ಆರೋಪವನ್ನು ಅವರು ಮಾಡಿದ್ದು ಬೆಂಗಳೂರಿನಲ್ಲಿ. ಬೆಳಿಗ್ಗೆ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಜೊತೆ…

ಆಸ್ಪತ್ರೆಗೆ ದಾಖಲಾದ ನಟ ಶಿವರಾಜ್ ಕುಮಾರ್ ; ಆತಂಕ ಪಡಬೇಕಾಗಿಲ್ಲ…

ಬೆಂಗಳೂರು : ಸ್ಯಾಂಡಲ್ ನಟ ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯದ ಕಾರಣದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಆತಂಕ ಪಡುವ ಅಗತ್ಯ ಇಲ್ಲ. ಒಂದೆರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ತಮ್ಮ ಪತ್ನಿ ಗೀತಾ ಶಿವರಾಜ್​​ ಕುಮಾರ್​ ಅವರ ಪರವಾಗಿ ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ, ಎಡಬಿಡದ ಚಿತ್ರೀಕರಣದಿಂದಾಗಿ ಅವರ ಸ್ಪಲ್ಪ ಆರೋಗ್ಯದ ಸಮಸ್ಯೆ ಉಂಟಾಗಿತ್ತು.…

ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ; ಕಣಕ್ಕಿಳಿದವರು ಯಾರು ?ಯದುವೀರ್, ಸೌಮ್ಯ ರೆಡ್ಡಿ, ಸುಧಾಕರ್ ಸೇರಿ ಹಲವರಿಂದ ನಾಮಪತ್ರ

ಬೆಂಗಳೂರು : ಏಪ್ರಿಲ್ 26 ರಂದು ನಡೆಯಲಿರುವ ಮೊದಲ ಹಂತದ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ ಇಂದು ಪ್ರಾರಂಭವಾಯಿತು, ಸೋಮವಾರ ಹಲವು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.…

ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ, ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ: ಸಿಎಂ ಸಿದ್ದರಾಮಯ್ಯ ಕೃತಜ್ಞತೆ

ಚಾಮರಾಜನಗರ; ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ. ಇದಕ್ಕೆ ನೀವು ಮುಂದಾಗಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದರು. ನಮ್ಮ…

ನಾಳೆ ಕರ್ನಾಟಕಕ್ಕೆ ಅಮಿತ್ ಷಾ. ರಾಜ್ಯ ಬಿಜೆಪಿಯ ಸಮಸ್ಯೆಗೆ ಅವರ ಬಳಿ ಪರಿಹಾರ ಇದೆಯೆ ?

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಷಾ ನಾಳೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ರೋಡ್ ಶೋ ಬೆಂಗಳೂರಿನಲ್ಲಿ ಸಭೆ ಹಾಗೂ ಕೋರ್ ಕಮೀಟಿ ಸಭೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಚುನಾವಣೆಯ ನಾಮಪತ್ರಗಳ ಸಲ್ಲಿಕೆ ಪ್ರಾರಂಭವಾಗಿರುವ ಈ ಸಂದರ್ಭದಲ್ಲಿ ಬಿಜೆಪಿಯ ಮುಂದೆ ಹಲವು ರೀತಿಯ ಸವಾಲುಗಳಿವೆ. ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ಭಿನ್ನಾಭಿಪ್ರಾಯಗಳು ಬಹುದೊಡ್ಡ…

ತಡೆರಹಿತ ವಿದ್ಯುತ್‌ ಪೂರೈಕೆಗೆ ‘ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್ ವಾಹನಗಳ’ ನಿಯೋಜನೆ: ಸಚಿವ ಕೆ.ಜೆ. ಜಾರ್ಜ್‌

ಬೆಂಗಳೂರು : ನಿರಂತರ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು ಮೈಸೂರು ಮತ್ತು ಗುಲ್ಬರ್ಗ ಪ್ರದೇಶಗಳ 400 ಕೆ.ವಿ.ವರೆಗಿನ ಪ್ರಸರಣ ಮಾರ್ಗಗಳು ಮತ್ತು ಸಬ್‌ಸ್ಟೇಷನ್‌ಗಳ ನಿರ್ವಹಣೆಗಾಗಿ ಎರಡು ಇನ್ಸುಲೇಟೆಡ್ ಏರಿಯಲ್ ವರ್ಕ್ ಪ್ಲಾಟ್‌ಫಾರ್ಮ್ ವಾಹನಗಳನ್ನು ನಿಯೋಜಿಸಲಿದೆ. “ಸಾಮಾನ್ಯವಾಗಿ ವಿದ್ಯುತ್‌ ಮಾರ್ಗಗಳ ನಿರ್ವಹಣೆಗಾಗಿ ತಾಸುಗಟ್ಟಲೆ ವಿದ್ಯುತ್‌ ಪೂರೈಕೆ ಸ್ಥಗಿತಗೊಳಿಸಬೇಕಾಗುತ್ತದೆ. ಆದರೆ, ಇನ್ಸುಲೇಟೆಡ್ ಏರಿಯಲ್…