Category ರಾಜ್ಯ

ಜನರ ಆಶೋತ್ತರಗಳಿಗೆ ಸ್ಪಂದಿಸುವ ಪಕ್ಷ ಕಾಂಗ್ರೆಸ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ನಮ್ಮ ಸರ್ಕಾರ ಕೊಟ್ಟ ಭಾಷೆಯನ್ನು ಉಳಿಸಿಕೊಂಡಿದೆ. ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ. ತನ್ಮೂಲಕ ಕಾರ್ಯಕರ್ತರಿಗೆ ಶಕ್ತಿ ತುಂಬಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಮುಖಂಡರ ಸಭೆಯಲ್ಲಿ ಮಾತನಾಡಿದ ಸಚಿವರು, ಬೆಳಗಾವಿ…

ನಾವು ಜೆಡಿಎಸ್ ನವರನ್ನು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮಾಡಿದ್ದೇವೆ: ಡಿ.ಕೆ. ಸುರೇಶ್

ಬೆಂಗಳೂರು : “ನಾವು ಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ. ಆ ಮೂಲಕ ದೇಶ ಹಾಗೂ ರಾಜ್ಯದ ಜನರ ನೆನಪಿನಲ್ಲಿ ಅವರು ಉಳಿಯುವಂತೆ ಮಾಡಿದ್ದೇವೆ” ಎಂದು ಸಂಸದ ಡಿ.ಕೆ. ಸುರೇಶ್ ತಿರುಗೇಟು ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸುರೇಶ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ಸಿನಂತೆ ಬಿಜೆಪಿಯವರು ಕುತ್ತಿಗೆ ಕೊಯ್ಯುವ ಕೆಲಸ ಮಾಡಿಲ್ಲ ಎಂಬ…

ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಲು ಸುಮಲತಾ ಅವರಿಗೆ ಹೈಕಮಾಂಡ್ ರಾಜಿ ಸೂತ್ರ

ನವದೆಹಲಿ : ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟು ಸಂಸದೆ ಸುಮಲತಾ ಅವರನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸುಳಿವು ನೀಡಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಾರ್ಚ್ 22ರಂದು ನಡೆಯಲಿರುವ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಈ…

ಅಂಗನವಾಡಿ ಕಾರ್ಯಕರ್ತೆಯರ ಸಭೆ ನಡೆಸಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಳಗಾವಿ : ಅಂಗನವಾಡಿ ಕಾರ್ಯಕತೆರ್ಯರಿಗೆ ಇತ್ತೀಚೆಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಅವರ ಕೆಲಸದ ಒತ್ತಡವನ್ನು ನಿವಾರಿಸಬೇಕೆಂದು ಮನವಿ ಪತ್ರ ನೀಡಲು ಬಂದಿದ್ದರು. ಚುನಾವಣೆಗೆ ಸಂಬಂಧಪಟ್ಟಂತೆ ನಾನು ಸಭೆ ನಡೆಸಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ನೀತಿ ಸಂಹಿತೆ ಉಲ್ಲಂಘಿಸಿ ಸಚಿವರು ಅಂಗವಾಡಿ ಕಾರ್ಯಕರ್ತೆಯರ ಸಭೆ ನಡೆಸಿದ್ದಾರೆ ಎಂದು…

ಟಿಕೆಟ್ ಹಂಚಿಕೆಯ ಕಗ್ಗಂಟು; ಮಾರ್ಚ್ 22 ರಂದು ಬಿಜೆಪಿ ಪಟ್ಟಿ

ನವದೆಹಲಿ : ಭಾರತೀಯ ಜನತಾ ಪಾರ್ಟಿಯ ಟಿಕೆಟ್ ಹಂಬಿಕೆಯ ಕಗ್ಗಂಟು ಹಾಗೆ ಮುಂದುವರಿದಿದೆ..ಇದನ್ನು ಬಗೆಹರಿಸಲು ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಮತ್ತು ವಿಧಾನ ಸಭೆಯ ಪ್ರತಿ ಪಕ್ಷದ ನಾಯಕ ಆರ್. ಆಶೋಕ್ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇಂದು ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ, ಮಾರ್ಚ್ 22 ರಂದು ಬಿಜೆಪಿಯ ಇನ್ನೊಂದು…

ಕೇಂದ್ರದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯ ಪ್ರಶ್ನಿಸಿದ್ದೇನೆ, ಬಿಜೆಪಿ ಏನೇ ಅಂದರೂ ಚಿಂತೆಯಿಲ್ಲ: ಡಿ.ಕೆ. ಸುರೇಶ್ ಪ್ರತಿಪಾದನೆ

ರಾಮನಗರ : “ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯದ ವಿರುದ್ಧ ನಾನು ಧ್ವನಿ ಎತ್ತಿದ್ದೇನೆ. ಬಿಜೆಪಿಯವರು ಅದನ್ನು ದೇಶ ವಿಭಜನೆ ಎಂದುಕೊಂಡರೆ ನಾನೇನು ಮಾಡಲು ಸಾಧ್ಯವಿಲ್ಲ” ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಹಾರೋಹಳ್ಳಿಯಲ್ಲಿ ಅನ್ಯಪಕ್ಷಗಳ ನಾಯಕರ ಬೆಂಬಲ ಪಡೆದ ನಂತರ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಅವರು ನಿಮ್ಮ ಹೇಳಿಕೆಯನ್ನು…

ಮೈತ್ರಿಯಲ್ಲಿ ಸಮಸ್ಯೆ ಇಲ್ಲ; ಎಲ್ಲಾ ಕ್ಷೇತ್ರ ಗೆಲ್ಲಲು ಒಟ್ಟಾಗಿ ಕೆಲಸ ಮಾಡುತ್ತೇವೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಎನ್‌ಡಿಎ ಮೈತ್ರಿಕೂಟ ಗೆಲ್ಲಬೇಕು. ಆ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಮುಖಂಡರ ಭಾವನೆಗಳನ್ನಷ್ಟೇ ನಾನು ಹೇಳಿದ್ದೇನೆ ಅಷ್ಟೇ. ಈ ಬಗ್ಗೆ ನಮ್ಮ ರಾಷ್ಟ್ರೀಯ…

ಹೃದಯದ ಶಸ್ತ್ರ ಚಿಕಿತ್ಸೆಗೆ ಚೆನ್ನೈ ಗೆ ತೆರಳಿದ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೃದಯದ ಶಸ್ತ್ರ ಚಿಕಿತ್ಸೆಗೆ ಚೆನ್ನೈಗೆ ತೆಳದಿದ್ದಾರೆ. ಗುರುವಾರ ಶಸ್ತ್ರ ಚಿಕಿತ್ಸೆ ನಡೆಯಲಿದೆ. ನಂತರ ಸುಮಾರು ಒಂದು ವಾರ ಅವರು ಅಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ. ಅವರಿಗೆ ಮೊದಲಿನಿಂದಲೂ ಹೃದಯದ ಸಮಸ್ಯೆ ಇತ್ತು. ಈಗಾಗಲೇ ಎರಡು ಬಾರಿ ಅವರಿಗೆ ಶಸ್ತ್ರ ಚಿಕಿತ್ಸೆ ಆಗಿದೆ. ಈಗ ಅವರಿಗೆ ಸ್ಟಂಟ್ ಅಳವಡಿಕೆ ಮಾಡಲಾಗುವುದು. ಶಸ್ತ್ರ…

ಬೆಂಗಳೂರು ಗ್ರಾಮಾಂತರಕ್ಕೆ ಅರೆಸೇನಾ ಪಡೆ ನಿಯೋಜಿಸಲು ಆಯೋಗಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಿಂದ ಚುನಾವಣಾ ಅಕ್ರಮಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಕೂಡಲೇ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯ ಮಾಡಿದರು. ಮಂಗಳವಾರ ತುರ್ತು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾರದರ್ಶಕ ಚುನಾವಣೆ ನಡೆಸುವ…

ದೇವೇಗೌಡರ ಅಳಿಯ ಅವರನ್ನು ಬಿಜೆಪಿಯಿಂದ ಸ್ಪರ್ಧೆ ಮಾಡಿಸಿದ್ದು ಜೆಡಿಎಸ್ ನ ಮೊದಲ ಆತ್ಮಹತ್ಯೆ ಪ್ರಯತ್ನ: ಡಿ.ಕೆ. ಶಿವಕುಮಾರ್

D K SHIVAKUMAR

ಬೆಂಗಳೂರು : “ದೇವೇಗೌಡರ ಅಳಿಯ ಅವರು ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡಲು ಅವಕಾಶ ನೀಡಿದ್ದು ಜೆಡಿಎಸ್ ನ ಮೊದಲ ಆತ್ಮಹತ್ಯೆ ಪ್ರಯತ್ನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬಣ್ಣಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಮಂಗಳವಾರ ಪ್ರತಿಕ್ರಿಯಿಸಿದರು. 2 ಸ್ಥಾನಕ್ಕಾಗಿ ಮೈತ್ರಿ ಮಾಡಿಕೊಳ್ಳಬೇಕಿತ್ತೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ;”ಇದನ್ನು…