Category ಲೋಕಸಭೆ – ಚುನಾವಣೆ

ತಮ್ಮ ಕುಟುಂಬದ ಪರಂಪರೆಯನ್ನು ಮುಂದುವರಿಸಿಯೇ ಬಿಟ್ಟ ನಿಖಿಲ್, ಅಜ್ಜ ಅಪ್ಪರಂತೆ ನಿಖಿಲ್ ಕೂಡ ಹಾಕಿದರು ಕಣ್ಣೀರು..!

ಬೆಂಗಳೂರು : ದೇವೇಗೌಡರ ಕುಟುಂಬದ ಪರಂಪರೆ ಅದು. ಈ ಪರಂಪರೆಯನ್ನು ಪ್ರಾರಂಭಿಸಿದವರು ಸನ್ಮಾನ್ಯ ದೇವೇಗೌಡರು. ಅವರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿದಾಗ. ಪ್ರಧಾನಿ ಹುದ್ದೆಯನ್ನು ಕಳೆದುಕೊಂಡಾಗ ಅವರ ಕಣ್ಣಿನಲ್ಲಿ ನೀರು ಬಂದಿತ್ತು ಈ ಪರಂಪರೆಯನ್ನು ಕುಮಾರಸ್ವಾಮಿ ಅವರು ಮುಂದುವರಿಸಿದರು. ಬಿಜೆಪಿ ತಮಗೆ ಮೋಸ ಮಾಡಿ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡದಾಗ ಅವರು ಕಣ್ಣೀರು ಹಾಕಿದ್ದರು. ನಂತರ ಹಲವು ಸಂದರ್ಭದಲ್ಲಿ…

ಕಂಗನಾಗೆ ಮೋದಿಯವರೇ ಸ್ಪೂರ್ತಿ. ಬಿಜೆಪಿ ಅವರ ನ್ಯಾಚುರಲ್ ಆಯ್ಕೆ..

ನನಗೆ ಪ್ರಧಾನಿ ನರೇಂದ್ರ ಮೋದಿಯವರೇ ಸ್ಪೂರ್ತಿ…ಈ ಮಾತು ಹೇಳಿದವರು ಚಿತ್ರ ನಟಿ ಕಂ ರಾಜಕಾರಣಿ ಕಂಗನಾ ರಣಾವತ್.ನಾನು ಕಳೆದ ೨೦ ವರ್ಷಗಳಿಂದ ಚಿತ್ರರಂಗದಲ್ಲಿ ಇದ್ದೇನೆ. ಈಗ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಈಗ ನಾನು ಬಿಜೆಪಿ ಅಭ್ಯರ್ಥಿ ಮಾತ್ರ ಎಂದು ಅವರು ಹೇಳಿದ್ದಾರೆ.ನಾನು ಬಿಜೆಪಿಯಿಂದ ಸ್ಪರ್ಧಿಸುತ್ತಿರುವುದು ನ್ಯಾಚುರಲ್. ಎಂದು ಹೇಳಿರುವ ಕಂಗನಾ ರಾಜಕೀಯ ಎಲ್ಲರಿಗೂ…

ಕಾವೇರಿ ನದಿಯಲ್ಲಿ ಕೊಚ್ಚಿಹೋದ ಸ್ವಾಭಿಮಾನ; ಬಿಜೆಪಿ ಸೇರಲಿರುವ ಸುಮಲತಾ, ಕುಮಾರಸ್ವಾಮಿ ಅವರಿಗೆ ಬೆಂಬಲ

ಬೆಂಗಳೂರು : ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುವ ನಿರ್ಧಾರವನ್ನು ಕೈಗೊಂಡಿದ್ದಾರೆ. ಶನಿವಾರ ಏಪ್ರಿಲ್ 6 ರಂದು ಅವರು ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸುಮಲತಾ ಬೆಂಬಲಿಸಲಿದ್ದಾರೆ.ಇದರೊಂದಿಗೆ ಮಂಡ್ಯ ರಾಜಕೀಯ ಒಂದು ಸುತ್ತು ಬಂದಂತಾಗಿದೆ. ಪರಸ್ಪರ ಕಚ್ಚಾಡಿಕೊಂಡವರು, ದೂಷಣೆ ಮಾಡಿದವರು ಒಂದಾಗುತ್ತಿರುವ ಸೋಜಿಗ…

ಅಮಿತ್ ಷಾ ರೋಡ್ ಶೋ…ಜೆಡಿಎಸ್ ಕಾರ್ಯಕರ್ತರ ಕೇಸರೀಕರಣ. ಕೇಳಿ ಬಂದ ಜೈಶ್ರೀರಾಮ ಘೋಷಣೆ..ಜೆಡಿಎಸ್ ಕಾರ್ಯಕರ್ತರನ್ನು ಬಿಜೆಪಿ ಮಡಿಲಿಗೆ ಹಾಕಿದ ಕುಮಾರಣ್ಣ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಇವತ್ತು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಚೆನ್ನಪಟ್ಟಣದಲ್ಲಿ ರೋಡ್ ಶೋ ನಡೆಸಿದರು. ಅವರ ಜೊತೆ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಇದ್ದರು.ಬಿಜೆಪಿ ರಾಜ್ಯ ಘಟಕದ್ ಅಧ್ಯಕ್ಷ ವಿಜಯೇಂದ್ರ ಕೂಡ ಪಾಲ್ಗೊಂಡಿದ್ದರುಕುಟುಂಬ ರಾಜಕಾರಣವನ್ನು…

ಜನರ ಆಶೀರ್ವಾದ ಇರುವವರೆಗೆ ಯಾವುದೇ ಜೀವ ಬೆದರಿಕೆಗಳಿಗೆ ಅಂಜುವುದಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ನನಗೆ ಎಷ್ಟೇ ಜೀವಬೆದರಿಕೆಗಳು ಬರಲಿ, ಎದುರಿಸುತ್ತೇನೆ. ಜನರ ಆಶೀರ್ವಾದ ಇರುವವರೆಗೆ ಯಾವುದೇ ಜೀವ ಬೆದರಿಕೆಗಳಿಗೆ ಅಂಜುವುದಿಲ್ಲ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ರಿಂಗ್ ರಸ್ತೆಯ ಮೊಘಲ್ ಗಾರ್ಡನ್ ನಲ್ಲಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ದೇಶದ ಸ್ವಾತಂತ್ರ್ಯ ಹಿನ್ನಲೆ ಹಾಗೂ…

ಸೌಮ್ಯರೆಡ್ಡಿ ನಮ್ಮ ಮನೆ ಮಗಳು, ಅವರನ್ನು 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ಡಿ ಕೆ ಶಿವಕುಮಾರ್

ಬೆಂಗಳೂರು : ಸೌಮ್ಯ ರೆಡ್ಡಿ ನಮ್ಮ ಮನೆ ಮಗಳು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕನಿಷ್ಠ 1 ಲಕ್ಷ ಮತಗಳ ಅಂತರದಲ್ಲಿ ಅವರನ್ನು ಗೆಲ್ಲಿಸಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮತದಾರರಲ್ಲಿ ಮನವಿ ಮಾಡಿದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರ ನಾಮಪತ್ರ ಸಲ್ಲಿಕೆಗೂ ಮುಂಚಿತವಾಗಿ ಜಯನಗರದಲ್ಲಿ ನಡೆದ ಮೆರವಣಿಗೆ…

ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ; ಕಣಕ್ಕಿಳಿದವರು ಯಾರು ?ಯದುವೀರ್, ಸೌಮ್ಯ ರೆಡ್ಡಿ, ಸುಧಾಕರ್ ಸೇರಿ ಹಲವರಿಂದ ನಾಮಪತ್ರ

ಬೆಂಗಳೂರು : ಏಪ್ರಿಲ್ 26 ರಂದು ನಡೆಯಲಿರುವ ಮೊದಲ ಹಂತದ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ ಇಂದು ಪ್ರಾರಂಭವಾಯಿತು, ಸೋಮವಾರ ಹಲವು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.…

ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ, ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ: ಸಿಎಂ ಸಿದ್ದರಾಮಯ್ಯ ಕೃತಜ್ಞತೆ

ಚಾಮರಾಜನಗರ; ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ. ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ. ಇದಕ್ಕೆ ನೀವು ಮುಂದಾಗಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದ ಬಳಿಕ ಮಾತನಾಡಿದರು. ನಮ್ಮ…

ಮನೆಗೆ ನೀರು, ಅಕ್ಕಿ, ಕೊವಿಡ್ ಲಸಿಕೆ ಕೊಟ್ಟು ಜೀವ ಉಳಿಸಿದ  ಮೋದಿ ಋಣ ತೀರಿಸಲು ಬಿಜೆಪಿಗೆ ಮತ ಹಾಕಿ: ಬಸವರಾಜ ಬೊಮ್ಮಾಯಿ

ಗದಗ: ಎಲ್ಲರ ಮನೆಗೆ ನಲ್ಲಿ ನೀರು, ಐದು ಕೆಜಿ ಅಕ್ಕಿ, ಕೊವಿಡ್ ಲಸಿಕೆ ಕೊಟ್ಟು ಎಲ್ಲರ ಜೀವ ಉಳಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಋಣ ತೀರಿಸಲು ಬಿಜೆಪಿಗೆ ಮತ ಹಾಕಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು. ಇಂದು ರೋಣ ವಿಧಾನಸಭಾ…

ಮಂಡ್ಯದ ಜನ ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ, ಟೂರಿಂಗ್ ಟಾಕೀಸ್ ರಾಜಕಾರಣ ಇಲ್ಲಿ ನಡೆಯಲ್ಲ: ಡಿ.ಕೆ.ಶಿವಕುಮಾರ್

ಮಂಡ್ಯ : “ಮಂಡ್ಯದ ಜನ ಸ್ಥಳೀಯರಿಗೆ ಬಿಟ್ಟು ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ. ಮಂಡ್ಯದ ಗೌಡಿಕೆ, ಆಡಳಿತವನ್ನು ಬೇರೆಯವರಿಗೆ ಬಿಟ್ಟುಕೊಟ್ಟ ಇತಿಹಾಸ ನಮ್ಮ ಮುಂದೆ ಇಲ್ಲ. ಇಲ್ಲಿ ಟೂರಿಂಗ್ ಟಾಕೀಸ್ ರಾಜಕಾರಣ ನಡೆಯಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪರೋಕ್ಷವಾಗಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ…