Category Bangaluru

ದಿನನಿತ್ಯದ ಸವಾಲುಗಳಿಗೆ ಮಾಧ್ಯಮ ಕ್ಷೇತ್ರ ಸುಸಜ್ಜಿತಗೊಳ್ಳಬೇಕು: ಎಂ ವೀರಪ್ಪಮೊಯ್ಲಿ

National Press Day 2024 : ಮನುಷ್ಯನಲ್ಲಿ ಯಾವ ರೀತಿ ಕ್ಷಿಪ್ರವಾಗಿ ಬದಲಾವಣೆಯಾಗುತ್ತಿದೆ. ಅದಕ್ಕೆ ಸರಿಯಾದ ಸ್ಪಂದನೆಯನ್ನು ಕೂಡ ಮಾದ್ಯಮ ಕ್ಷೇತ್ರ ನೀಡುತ್ತಿದೆ. ಮಾಧ್ಯಮ ನಿಂತ ನೀರಲ್ಲ, ಮನುಷ್ಯ ಯಾವ ರೀತಿ ಬದಲಾವಣೆಯಾಗುತ್ತಾನೋ ಅದೇ ರೀತಿ ಮಾಧ್ಯಮ ಕ್ಷೇತ್ರವು ಬದಲಾಗುತ್ತಿದೆ.

APL ಕಾರ್ಡುಗಳ ರದ್ದತಿಗೆ ಯಾವುದೇ ನಿರ್ದೆಶನ ನೀಡಿಲ್ಲ : ಆಹಾರ ಇಲಾಖೆ ಸ್ಪಷ್ಟೀಕರಣ

ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಕಾರ್ಯ ಕೈಗೊಂಡ ಪರಿಣಾಮ, ಕೆಲವು ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡುಗಳಾಗಿ ಪರಿವರ್ತಿಸಿರುವುದರಿಂದ 48,768 ಕಾರ್ಡುಗಳು ಹೆಚ್ಚಳವಾಗಿವೆ. ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಕಾರ್ಡುಗಳು ರದ್ದಾಗಿವೆ ಎಂದು ಸುದ್ದಿ ಪ್ರಕಟವಾಗಿರುವುದು ಸತ್ಯ ಸಂಗತಿಯಲ್ಲ

ಬಿಜೆಪಿಗೆ ಗ್ಯಾರಂಟಿ ಯೋಜನೆಗಳ ಮಹತ್ವ ಹಾಗೂ ಬೆಲೆ ಏರಿಕೆ ಬಿಸಿ ಗೊತ್ತಾಗಿದೆ: ಡಿ ಕೆ ಶಿವಕುಮಾರ್

DCM D K Shivakumar : ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟ ಚುನಾವಣೆಯಲ್ಲಿ ಗೆದ್ದರೆ ಮಹಿಳೆಯರಿಗೆ 2,100 ಕೊಡುವುದಾಗಿ ಹೇಳಿದೆ. ನಾವು 3 ಸಾವಿರ ಯುವಕರಿಗೆ 4 ಸಾವಿರ ಹಾಗೂ 25 ಸಾವಿರ ಮೊತ್ತದ ಜೀವವಿಮೆ ನೀಡುವುದಾಗಿ ಭರವಸೆ ನೀಡಿದ್ದೇವೆ.

ಪಶ್ಚಿಮಘಟ್ಟದ ಸಂರಕ್ಷಣೆಗೆ ಕಾಪುನಿಧಿ ಸಂಗ್ರಹ ಗುರಿ, ನೀರಿನ ಬಿಲ್ ನಲ್ಲಿ ಹಸಿರು ಸೆಸ್: ಈಶ್ವರ ಖಂಡ್ರೆ

ಬೆಂಗಳೂರು : ಜೀವವೈವಿಧ್ಯತೆಯ ತಾಣ ಪಶ್ಚಿಮಘಟ್ಟ ಹಲವು ನದಿಗಳ ಮೂಲವಾಗಿದ್ದು, ಈ ನದಿಗಳ ನೀರು ಪೂರೈಕೆಯಾಗುವ ನಗರಗಳಿಗೆ ಹಸಿರು ಸೆಸ್ ವಿಧಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ. ಪಶ್ಚಿಮಘಟ್ಟಗಳು ತುಂಗಾ, ಭದ್ರಾ, ಕಾವೇರಿ, ಕಬಿನಿ, ಹೇಮಾವತಿ, ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿದಂತೆ ಹಲವು ನದಿಗಳ ಮೂಲವೂ…

50 ಜನ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಐವತ್ತು ಜನ ಕಾಂಗ್ರೆಸ್ ಎಂಎಲ್ಎ ಗಳಿಗೆ ಬಿಜೆಪಿಯವರು 50 ಕೋಟಿ ಆಮಿಷ ಒಡ್ಡಿರುವುದು ನಿಜ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಮರ್ಥಿಸಿದರು. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪಕ್ಷದ ಐವತ್ತು ಶಾಸಕರಿಗೆ ತಲಾ 50 ಕೋಟಿಯಂತೆ ಬಿಜೆಪಿಯವರು…

108 ಸಿಬ್ಬಂದಿಗಳಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : 108 ಆರೋಗ್ಯ ಕವಚದ ಅಂಬ್ಯುಲೆನ್ಸ್ ಚಾಲಕರಿಗೆ ಸರ್ಕಾರದ ಕಡೆಯಿಂದ ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಅಂಬ್ಯುಲೆನ್ಸ್ ಚಾಲಕರಿಗೆ ನ್ಯಾಯಯುತವಾಗಿ ಸಿಗಬೇಕಾದ ವೇತನವನ್ನ ಕಾಲ ಕಾಲಕ್ಕೆ ಸರಿಯಾಗಿ ಸಂಬಂಧಿಸಿದ ಏಜನ್ಸಿಯವರಿಗೆ ಸರ್ಕಾರ ನೀಡುತ್ತಾ ಬಂದಿದೆ ಎಂದರು. ಚಾಲಕರ…

ಕಲ್ಯಾಣ ಕರ್ನಾಟಕ ಭಾಗದಲ್ಲಿ 480 ಸಮುದಾಯ ಶೌಚಾಲಯ ನಿರ್ಮಾಣ: ಪ್ರಿಯಾಂಕ್‌ ಖರ್ಗೆ

ನಿರ್ಮಾಣದ ನಂತರ ನಿರ್ವಹಣೆಯ ಜವಾಬ್ದಾರಿಯನ್ನು ನಿರ್ಮಾಣ ಸಂಸ್ಥೆಗೆ ಒಪ್ಪಿಸಲಾಗುತ್ತಿದ್ದು ಇದು ವಿನೂತನ ಪ್ರಯೋಗವಾಗಿದೆ, ನಿರ್ಮಾಣದ ನಂತರ ನಿರ್ವಹಣೆಯಿಲ್ಲದೆ ಸೊರಗಬಾರದು ಎಂಬ ಉದ್ದೇಶದಿಂದ ಈ ಹೊಸ ಪದ್ಧತಿಯಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ

ಕ್ರೀಡಾ ಮಕ್ಕಳ ಪ್ರೋತ್ಸಾಹಕ್ಕೆ ಕೃಪಾಂಕ: ಸಕಾರಾತ್ಮಕವಾಗಿ ಪರಿಶೀಲಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು : ಕ್ರೀಡಾ ಮನೋಭಾವ ರೂಡಿಸಿಕೊಂಡರೆ ಮನುಷ್ಯ ಸೃಷ್ಟಿಯ ಮೇಲು – ಕೀಳಿನ‌ ತಾರತಮ್ಯ ಹೋಗಲಾಡಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ತೃತೀಯ ಮಿನಿ ಒಲಂಪಿಕ್ಸ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗೆ ಜಾತಿ, ಧರ್ಮದ ಗಡಿ ಮತ್ತು ಮಿತಿಗಳಿಲ್ಲ. ಕ್ರೀಡಾಪಟು ಎಲ್ಲಾ ತಾರತಮ್ಯಗಳನ್ನು ಮೀರಿರುತ್ತಾನೆ ಎಂದರು. ಕ್ರೀಡೆಗಳಲ್ಲಿ, ಒಲಂಪಿಕ್ಸ್…

ಬಗರ್ ಹುಕುಂ ಅರ್ಜಿ ವಿಲೇಗೆ ಈ ತಿಂಗಳ 25 ರ ವರೆಗೆ ಗಡುವು, ತಪ್ಪಿದರೆ ನೊಟೀಸ್: ಅಧಿಕಾರಿಗಳಿಗೆ ಸಚಿವರ ಎಚ್ಚರಿಕೆ..!

ಬೆಂಗಳೂರು : ಬಡವರಿಗೆ ಭೂ ಮಂಜೂರುಗೊಳಿಸುವ ಬಗರ್ ಹುಕುಂ ಅರ್ಜಿಗಳ ಪೈಕಿ ಅರ್ಹ-ಅನರ್ಹ ಅರ್ಜಿಗಳನ್ನು ರಾಜ್ಯದ ಎಲ್ಲಾ ತಹಶೀಲ್ದಾರರೂ ಈ ತಿಂಗಳ 25 ರ ಒಳಗೆ ವಿಂಗಡಿಸಿ ಜಿಲ್ಲಾಧಿಕಾರಿಗಳಿಗೆ ನೀಡಬೇಕು. ತಪ್ಪಿದರೆ ಎಲ್ಲರಿಗೂ ಶೋಕಾಸ್ ನೊಟೀಸ್ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳನ್ನು ಎಚ್ಚರಿಸಿದರು. ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ…

ನಾನೂ ಈ ರಾಜ್ಯದ ಸಿಎಂ ಆಗಬೇಕು, ವಿದ್ಯಾರ್ಥಿಗಳಿಗೂ ಫ್ರೀ ಬಸ್ ಕೊಡಿ ಅಂತಂದ ವಿದ್ಯಾರ್ಥಿಗಳಿಗೆ ಡಿಸಿಎಂ ಹೇಳಿದ್ದೇನು..?

ಬೆಂಗಳೂರು : “ಪ್ರಜಾಪ್ರಭುತ್ವದಲ್ಲಿ ಯಾರು ಏನು ಬೇಕಾದರು ಆಗಬಹುದು. ನಮ್ಮ ತಂದೆ ರೈತರಾಗಿದ್ದರು, ನಿಮ್ಮ ವೃತ್ತಿ ಆಯ್ಕೆ ಮಾಡಿಕೊಳ್ಳಬೇಕಾದರೆ ಗುಣಮಟ್ಟದ ಶಿಕ್ಷಣ, ಆರ್ಥಿಕ ಸ್ಥಿತಿ ಹಾಗೂ ನಾಯಕತ್ವದ ಗುಣ ಬೆಳಸಿಕೊಳ್ಳಬೇಕು..” ಇದು ವಿಧಾನಸೌಧದಲ್ಲಿ ಶಾಲಾ ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಂಚಶೀಲನಗರದ ಪಾಲಿಕೆ ಹಿರಿಯ ಪ್ರಾಥಮಿಕ ಶಾಲೆ 7ನೇ ತರಗತಿ ವಿದ್ಯಾರ್ಥಿ ವಿದ್ಯಾಸಾಗರ್, ನಾನು ಈ…