ರಾಜಿನಾಮೆ ಕೊಟ್ಟು ಚುನಾವಣೆಗೆ ಹೋಗೋಣ; ಯಾರು ಗೆಲ್ತಾರೆ ನೋಡೋಣ: ಸಿದ್ದರಾಮಯ್ಯಗೆ ಜಿಟಿಡಿ ಸವಾಲ್

ಮೈಸೂರು : ವರುಣ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡ್ತಿನಿ. ಇಬ್ಬರೂ ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿಯೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಜಿ ಸಚಿವ ಜಿ ಟಿ ದೇವೇಗೌಡರು ಅವರು ಸವಾಲು ಹಾಕಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಮೂರು ಬಾರಿ ಗೆದ್ದ ಜಿ ಟಿ ದೆವೇಗೌಡರು ಕಡಿದು ಕಟ್ಟಿಹಾಕಿದ್ದೇನು ಎಂದು ಸಿದ್ದರಾಮಯ್ಯ ಟೀಕಿಸಿದ್ದರು.…






