Gadag News : ಮಳೆ, ಗಾಳಿಗೆ ನೆಲಕಚ್ಚಿದ ಗೋವಿನಜೋಳ : ರೈತರು ಕಂಗಾಲು

Corn Crops Destroyed: ಎಂಟು ಎಕರೆ ಜಮೀನಿನಲ್ಲಿ ಸಮೃದ್ಧವಾಗಿ ಗೋವಿನಜೋಳ ಬೆಳೆದಿದ್ದರು. ಇನ್ನೇನು ಒಂದುವರೆ ತಿಂಗಳಲ್ಲಿ ಗೋವಿನಜೋಳ ಕಟಾವಿಗೆ ಬರುತ್ತಿತ್ತು. ಆದ್ರೆ, ಮಳೆ‌ ಹಾಗೂ ಗಾಳಿಯಿಂದ ಸಂಪೂರ್ಣವಾಗಿ ನೆಲಕಚ್ಚಿದೆ.

ಗದಗ : ತಾಲೂಕಿನ ಲಕ್ಕುಂಡಿ ಗ್ರಾಮದ ರೈತರ ಬದುಕು ಮಳೆ ಹಾಗೂ ಗಾಳಿಯಿಂದ ಮೂರಾಬಟ್ಟೆ ಆಗಿದೆ.‌ ಕಳೆದ ಎರಡು ದಿನಗಳಿಂದ ಮಳೆ, ಗಾಳಿಯ ಆರ್ಭಟ ಜೋರಾಗಿದ್ದು, 20 ಕ್ಕೂ ಹೆಚ್ಚು ರೈತರು, ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಗೋವಿನಜೋಳ ನೆಲಕಚ್ವಿದೆ.

ಇನ್ನೇನು ಒಂದುವರೆ ತಿಂಗಳಲ್ಲಿ ಫಸಲು ಕೈ ಸೇರಬೇಕಾಗಿತ್ತು. ಆದ್ರೆ, ಸಾಲ ಸೂಲ ಮಾಡಿ ಬೆಳೆದ ಬೆಳೆ ಮಳೆಗೆ ಸರ್ವನಾಶವಾಗಿದೆ. ಇಷ್ಟೊಂದು ಹಾನಿಯಾದರೂ ಕೃಷಿ ಇಲಾಖೆ ಅಧಿಕಾರಿಗಳು ರೈತರ ಜಮೀನುಗಳಿಗೆ ಭೇಟಿ ನೀಡಿಲ್ಲ.‌ ಕೂಡಲೇ ಹಾನಿಯಾದ ಪ್ರದೇಶಗಳ ಸರ್ವೆ ಮಾಡಿ, ರೈತರಿಗೆ ಸೂಕ್ತವಾದ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯ ಮಾಡಿದ್ದಾರೆ.

ಇನ್ನು ಲಕ್ಕುಂಡಿ ಗ್ರಾಮದ ಷಣ್ಮುಖ ಎನ್ನುವ ರೈತ ಕುಟುಂಬ ಮನೆಯಲ್ಲಿನ ಚಿನ್ನವನ್ನು ಅಡವಿಟ್ಟು, ಹಾಗೂ ಸ್ವಸಹಾಯ ಗುಂಪಿನಲ್ಲಿ ಸಾಲ ಸೂಲ ಮಾಡಿ, ಎಂಟು ಎಕರೆ ಜಮೀನಿನಲ್ಲಿ ಸಮೃದ್ಧವಾಗಿ ಗೋವಿನಜೋಳ ಬೆಳೆದಿದ್ದರು. ಇನ್ನೇನು ಒಂದುವರೆ ತಿಂಗಳಲ್ಲಿ ಗೋವಿನಜೋಳ ಕಟಾವಿಗೆ ಬರುತ್ತಿತ್ತು. ಆದ್ರೆ, ಮಳೆ‌ ಹಾಗೂ ಗಾಳಿಯಿಂದ ಸಂಪೂರ್ಣವಾಗಿ ನೆಲಕಚ್ಚಿದೆ.

ಸ್ವಂತ ಮಕ್ಕಳ‌ ಹಾಗೇ ಇಡೀ ಕುಟುಂಬ ಸದಸ್ಯರು ಹಗಲಿರುಳು ಕಷ್ಟಪಟ್ಟು ಬೆಳೆದಿದ್ದ ಬೆಳೆ ನಾಶವಾಗಿದೆ. ಎಂಟು ಎಕರೆ ಗೋವಿನಜೋಳ ಫಸಲು ಕೈ ಸೇರಿದ್ರೆ, 8 ರಿಂದ 10 ಲಕ್ಷ ರೂಪಾಯಿ ಆದಾಯ ಬರುತ್ತಿತ್ತು. ಸಾಲ ಸೂಲ ಮರು ಪಾವತಿಸಿ, ಮನೆ ಕಟ್ಟಿಸಿ ಮಕ್ಕಳ ಮದುವೆ ಮಾಡುವ ಪ್ಲಾನ್ ಮಾಡಿದ್ದ ರೈತ ಕುಟುಂಬ ಕಣ್ಣೀರು ಹಾಕುತ್ತಿದೆ.

ಮಳೆ ಹಾಗೂ ಗಾಳಿಯಿಂದ ರೈತರ ಕುಟುಂಬದ ಆಸೆ, ಕನಸು ನುಚ್ಚು ನೂರಾಗಿದೆ. ಹೀಗಾಗಿ ಸರ್ಕಾರ ನಮಗೆ ಸೂಕ್ತವಾದ ಪರಿಹಾರ ನೀಡಬೇಕು ಎಂದು ರೈತ ಮಹಿಳೆ ಒತ್ತಾಯ ಮಾಡಿದ್ದಾಳೆ.

ಕಳೆದ ಎರಡು ವರ್ಷ ಬರಗಾಲದಿಂದ ರೈತರ ಬದುಕು ಮೂರಾಬಟ್ಟೆಯಾಗಿತ್ತು. ಈ ಬಾರಿ ಆದರೂ ಒಳ್ಳೆಯ ಆದಾಯದ ನಿರೀಕ್ಷೆಯಲ್ಲಿದ್ದರು. ಆದ್ರೆ, ಮಳೆ, ಗಾಳಿ ರೈತರ ಬದುಕನ್ನು ಹಾಳು ಮಾಡಿದೆ.

Author

error: