Category ಜಿಲ್ಲೆ

ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿ.ಕೆ. ಶಿವಕುಮಾರ್

ಮಂಗಳೂರು : “ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ಸಂದರ್ಭದಲ್ಲಿ ಅವರು…

ಮತದಾನದ ಮೂಲಕ ಜನರೇ ಕಾಂಗ್ರೆಸ್ ನವರ ಕಪಾಳಕ್ಕೆ ಹೊಡೆಯುತ್ತಾರೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್ ಡಿಎ ಕಾಲದಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲ್ ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧೋಗತಿಗೆ ಗೋಗಿದೆ. ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್ ಗೆ…

ಅಭ್ಯರ್ಥಿ ನೀವೇ ಆಗಬೇಕು ಎಂದು ಕುಮಾರಸ್ವಾಮಿ ಅವರ ಮೇಲೆ ಒತ್ತಡ ಹೇರಿದ ಸಕ್ಕರೆನಾಡಿನ ಕಾರ್ಯಕರ್ತರು

ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ನೀವೇ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಒತ್ತಾಯ ಮಾಡಿದ ಸಕ್ಕರೆನಾಡಿನ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು, ಜೆ.ಪಿ.ನಗರದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ನಿವಾಸದ ಎದುರಿನ ರಸ್ತೆಯಲ್ಲಿಯೇ ಕೂತು ಘೋಷಣೆ ಕೂಗಿದ ಘಟನೆ ನಡೆಯಿತು. ಚೆನ್ನೈನಲ್ಲಿ ಮೂರನೇ ಬಾರಿಗೆ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಗೆ ಮರಳಿದ…

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ೨೦ ಸ್ಥಾನ: ಸಿಎಂ ಸಿದ್ದರಾಮಯ್ಯ

ಮೈಸೂರು : ನಮ್ಮದು ನುಡಿದಂತೆ ನಡೆದ ಸರ್ಕಾರ. ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ೨೦ ಕ್ಷೇತ್ರಗಳಲ್ಲಿ ನಮ್ಮ ಗೆಲುವು ನಿಶ್ಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಅಥವಾ ನಾಳೆ ಬಾಕಿ ಉಳಿದಿರುವ ಕಾಂಗ್ರೆಸ್ ಪಟ್ಟಿಗಳನ್ನು ಬಿಡುಗಡೆ ಮಾಡುತ್ತೇವೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಕಗ್ಗಂಟಾಗುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.…

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನಿಲುವು ಅನುಸರಿಸುತ್ತಿದೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ. ಒಂದೆಡೆ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟಿಸಿದ ಕಾಂಗ್ರೆಸ್ ಅದನ್ನು ವಿರೋಧಿಸುವ ಡಿಎಂಕೆ ಜತೆಗೆ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದೆ. ಹೀಗಾಗಿ ಕಾಂಗ್ರೆಸ್ ಡಿಎಂಕೆಯೊಂದಿಗೆ ಮಾಡಿಕೊಂಡ ಹೊಂದಾಣಿಕೆಯಿಂದ ಹೊರಬರಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಡಿಎಂಕೆ ವಿರೋಧಿಸುವುದರಿಂದ…

ಕೇಜ್ರಿವಾಲ್ ಬಂಧನದಲ್ಲಿ ಸರ್ಕಾರದ ಪಾತ್ರವಿಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟನೆ

ಹುಬ್ಬಳ್ಳಿ: ಅಬಕಾರಿ ನೀತಿ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಸಂಬಂಧ ದಿಲ್ಲಿ ಸಿಎಂ ಕೇಜ್ರಿವಾಲ್ ಬಂಧನ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಶಿಗ್ಗಾವಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿ, ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಅತಿ ಹೆಚ್ಚು ಅಂದರೆ 9 ಬಾರಿ ಸಮನ್ಸ್ ಕೊಟ್ಟಿದೆ. ಸ್ಪಂದಿಸದಿದ್ದಾಗ…

ಒಗ್ಗಟ್ಟಾಗಿ ಚುನಾವಣೆ ಮಾಡಿದರೆ ಗೆಲುವು ಖಚಿತ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರ ಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಾವೇರಿಯಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಸಚಿವರು, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ…

ಕಾಂಗ್ರೆಸ್ಸಿಗರಿಗೆ ರಾಜ್ಯದ ನೆಲ, ಜಲ, ಸಂಸ್ಕೃತಿ ಬಗ್ಗೆ ನೈಜ ಕಾಳಜಿ ಇಲ್ಲ: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೇಕೆದಾಟು ತಡೆ ಬಗ್ಗೆ ಡಿಎಂಕೆ ಪ್ರಣಾಳಿಕೆಯಲ್ಲೇ ಹೇಳಿದೆ. ಕಾಂಗ್ರೇಸ್ ಇಂಡಿಯಾ ಒಕ್ಕೂಟದಿಂದ ಡಿಎಂಕೆಯನ್ನು ಕೈ ಬಿಡುತ್ತದೆಯೇ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷ ಕಾಂಗ್ರೆಸ್ ತನ್ನ ನಿಲುವೇನು? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅಗ್ರಹಿಸಿದರು. ಮೇಕೆದಾಟು ತಡೆಯುವ…

ಟಿಕೆಟ್ ಸಿಗದೇ ರೆಬಲ್ ಆದವರು ಎಲ್ಲೂ ಹೋಗಲ್ಲ: ಶೀಘ್ರ ಎಲ್ಲಾ ಪರಿಹಾರ ಕಾಣಲಿದೆ: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಸಿಗದೆ ರೆಬಲ್ ಆಗಿರುವವರ ಜತೆ ಮಾತುಕತೆ ನಡೆದಿದ್ದು, ಅತಿ ಶೀಘ್ರ ಎಲ್ಲಾ ಪರಿಹಾರ ಕಾಣುವ ವಿಶ್ವಾಸವಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೊಪ್ಪಳದ ಸಂಗಣ್ಣ ಕರಡಿ ಅವರ ಜತೆ ಖುದ್ದು ನಾನೇ ಮಾತನಾಡಿರುವೆ. ಅವರೂ ಭರವಸೆ ಕೊಟ್ಟಿದ್ದಾರೆ ಎಂದು ತಿಳಿಸಿದರು. ಬಂಡಾಯ ದೀರ್ಘ…

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರ್ಥಿಕ ಪರಿಸ್ಥಿತಿ ಅಯೋಮಯ: ಬಸವರಾಜ ಬೊಮ್ಮಾಯಿ

ಹಾವೇರಿ: ಬಿಜೆಪಿ ಅವಧಿಯಲ್ಲಿಯೇ ಕರ್ನಾಟಕ ಆರ್ಥಿಕವಾಗಿ ಸದೃಡ ಆಗಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಆರ್ಥಿಕ ಸ್ಥಿತಿ ಅಯೋಮಯ ಆಗಿದೆ. ಖಜಾನೆಯೂ ಖಾಲಿಯಾಗಿದೆ. ಬರಗಾಲದಲ್ಲಿಯೂ ಸಹ ಇವರು ಹಣ ಬಿಡುಗಡೆ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಣೆಬೆನ್ನೂರು ತಾಲೂಕು ಮಾಕನೂರ್ ಬಳಿ ಚುನಾವಣಾ ಪ್ರಚಾರ ಸಭೆ ನಡೆಸಿದ…

error: