ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ದುರಂತ ಸ್ಥಳ ಪರಿಶೀಲಿಸಲು ನಾಳೆ (ಜುಲೈ 21) ಭಾನುವಾರ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವೆಡೆ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ, ಮನೆ ಹಾನಿ, ಬೆಳೆ ಹಾನಿ, ರಸ್ತೆ ಸಂಪರ್ಕ ಕಡಿತದಂತಹ ಘಟನೆಗಳು ನಡೆದಿವೆ. ಸಚಿವರು, ಶಾಸಕರು, ಅಧಿಕಾರಿಗಳು ಘಟನಾ ಸ್ಥಳಗಳಿಗೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ, ಪರಿಹಾರ ನೀಡುವ ಕೆಲ ಮಾಡುತ್ತಿದ್ದಾರೆ ಎಂದರು.

ಇದೇ ವೇಳೆ ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಇಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿಯವರೂ ಭೇಟಿ ಕೊಟ್ಟು ಪರಿಶೀಲಿಸಲಿ. ನಾನು, ನಮ್ಮ ಸಚಿವರು ಕೂಡ ಶಿರೂರಿಗೆ ಭೇತಿ ಕೊಟ್ಟು ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದರು.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣಾರ್ಭಟಕ್ಕೆ ಸೃಷ್ಟಿಯಾಗಿರುವ ಅನಾಹುತ, ಅವಾಂತರಗಳು ಒಂದೆರಡಲ್ಲ. ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ.

Author

Leave a Reply

Your email address will not be published. Required fields are marked *