ಚಾಮರಾಜನಗರ : ರಾಜಕೀಯ ನಿವೃತ್ತಿ ಪಡೆದಿರುವ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಭೇಟಿ ಮಾಡಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಾದ್ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಯಡಿಯೂರಪ್ಪ ಅವರು ಭೇಟಿ ಮಾಡಿದ್ದು ಕುತೂಹಲ ಮೂಡಿಸಿದೆ.
ಇವತ್ತಿನ ಭೇಟಿ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ಕಾರ್ಯಕ್ರಮಕ್ಕೆ ಬರುವಂತೆ ಯಡಿಯೂರಪ್ಪ ಆಹ್ವಾನ ನೀಡಿದರು ಎನ್ನಲಾಗಿದೆ. ಆದರೆ ಆರೋಗ್ಯದ ಕಾರಣ ನೀಡಿದ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಈ ಆಹ್ವಾನವನ್ನು ತಿರಸ್ಕರಿಸಿದರು ಎಂದು ಹೇಳಲಾಗಿದೆ.
ಯಡಿಯೂರಪ್ಪ ಅವರು ಬಂದು ಹೋದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಂಸದ ವಿ ಪ್ರಸಾದ್ ಮನೆಗೆ ಬಂದವರನ್ನು ಸೌಜನ್ಯದಿಂದ ಮಾತನಾಡಿ ಕಳುಹಿಸುವುದು ನಮ್ಮ ಸಂಸ್ಕೃತಿ. ನಾನು ಅವರನ್ನು ಸೌಜನ್ಯದಿಂದ ಮಾತನಾಡಿ ಕಳಿಸಿದ್ದೇನೆ. ಅವರು ಪ್ರಧಾನಿ ಅವರ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು. ನಾನು ನನ್ನದೇ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದುರು.
